ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಪದವಿಪೂರ್ವ ವಿಭಾಗದ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 1ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಆಡಳಿತ ವರ್ಗ, ಶಿಕ್ಷಕ ವರ್ಗ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿಗೆ ಸಂಭ್ರಮದಿಂದ ಬರಮಾಡಿಕೊಂಡರು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ವರ್ಷದ ಶುಭಾರಂಭ ಕೈಗೊಳ್ಳಲಾಯಿತು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಚಾಲಕ ನಾರಾಯಣ ಫಡ್ಕೆಯವರು ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯ ನೀತಿ ನಿಯಮಗಳನ್ನು ವಿವರಿಸಿ, ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಜಾಲಿ ಓ ಎ ಇವರು ವಹಿಸಿಕೊಂಡು, ಕಾಲೇಜು ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.
ಉಪನ್ಯಾಸಕಿ ವಸಂತಿ ಇವರು ಸ್ವಾಗತಿಸಿ, ಉಪನ್ಯಾಸಕ ಪದ್ಮನಾದ ಬಿ.ಕೆ ಇವರು ವಂದಿಸಿದರು. ಎಲ್ಲಾ ಸಿಬ್ಬಂದಿ ವರ್ಗದವರು ಸಹಕರಿಸಿದರು.


